ಭಾಷಣಗಳು

Hunger for equality, God and modernity

Convocation Address, Gujarat Vidya Peeth, October 18, 2007

Dear Chancellor, Vice-chancellor, Deans of Faculties, Members of the teaching staff, Governing Council members of the University, and students

I must first ask whether I deserve to give a convocation address in this great institution which the Mahatma created and remained its chancellor all his life. Now Sri Narayana Desai, whose great father could articulate what Gandhiji felt in his silence, is the Chancellor. I have read Sri Narayan Desai’s little book on his boyhood days in Gandhiji’s Ashram when he had the Mahatma for a playmate. Dr Sudarshan Iyengar who is your vice chancellor surprised me by speaking my language Kannada as well as revealing that your Chancellor Shri Narayana Desai wanted me. So am I here today to greet all of you who are graduating today.  read more »

ಇಂದೂ ಇರುವ ಗಾಂಧಿ

ಇಲ್ಲಿ ಬಂದ ಕೂಡಲೆ ನನಗೆ ನೆನಪಾಗುವುದು ಮುರಾರಿ ಬಲ್ಲಾಳ್‌. ಯಾಕೆಂದರೆ ಅವರು ನಮ್ಮನ್ನು ಈ ಹಾಲಿನಲ್ಲಿ ಈ ರೀತಿ ಕೂರಿಸಿ ಎಷ್ಟೋ ಸಭೆಗಳನ್ನು ಮಾಡಿದ್ದಾರೆ. ನನಗೆ ಇಲ್ಲಿರುವ ಬಹಳ ಜನ ಗೊತ್ತಾಗಿದ್ದು ಮುರಾರಿ ಬಲ್ಲಾಳರಿಂದ. ಅದಕ್ಕಿಂದ ಹಿಂದೆ ಕು. ಶಿ. ಹರಿದಾಸ ಭಟ್‌ರಿಂದ. ಅವರನ್ನು ಖಂಡಿತ ನೆನೆಯಬೇಕು. ನನ್ನನ್ನು ಉಡುಪಿಗೆ ಕರೆದುಕೊಂಡು ಬಂದವರು ಅವರು. ಇದೇ ಊರಿನವರು ನನ್ನ ಪೂರ್ವಿಕರು. ಆದರೆ ನಿಜದ ನನ್ನ ಉಡುಪಿಗೆ ಕರೆದುಕೊಂಡು ಬಂದವರು ಇವರು. ಇವರಿಬ್ಬರೂ ಪೈಗಳ ಸಹಾಯ ಪಡೆದು ಉಡುಪಿಗೆ ಉಳಿದ ಭಾರತದ ಜೊತೆ ಸಂಬಂಧ ಆಗುವಂತೆ ಮಾಡಿದರು.  read more »

ಭೈರಪ್ಪನವರ "ಆವರಣ"ದ ಬಗ್ಗೆ ಮಾಡಿದ ಭಾಷಣದ ಸಾರ

ನನಗೆ ಈ ಆವರಣವನ್ನು ಕುರಿತು ಒಂದು ಸಭೆ ಮಾಡುವುದೇ ಇಷ್ಟವಿರಲಿಲ್ಲ. ಇದಕ್ಕೆ ಬಹಳ ಮುಖ್ಯವಾದ ಕಾರಣ ಸಾಹಿತ್ಯ ಚರ್ಚೆಗೆ ಯೋಗ್ಯವಾದ ಒಳ್ಳೆಯ ಪುಸ್ತಕ ಇದು ಅಲ್ಲ ಎಂಬುದು. ಒಂದು ಕಾಲದಲ್ಲಿ ಭೈರಪ್ಪ ಮತ್ತು ನಾನು ಆಗೀಗ ಭೇಟಿಯಾಗುತ್ತಿದ್ದೆವು. ಚದುರಂಗರೂ ಇರುತ್ತಿದ್ದರು. ಆಗ ಅವರ ಪುಸ್ತಕಗಳನ್ನು ನಾನು ಓದುತ್ತಿದ್ದೆ. ಓದಿ ಚೆನ್ನಾಗಿಲ್ಲ ಅನ್ನಿಸಿದರೆ ಅದನ್ನು ಅವರಿಗೂ ಹೇಳುತ್ತಿದ್ದೆ. ಇಂಥ ಸಂದರ್ಭಗಳಲ್ಲಿ ಭೈರಪ್ಪನವರೂ `ನನಗೂ ಅಷ್ಟೊಂದು ಚೆನ್ನಾಗಿಲ್ಲ ಅನ್ನಿಸುತ್ತೆ' ಎನ್ನುತ್ತಿದ್ದ ಸ್ನೇಹದ ಕಾಲ ಒಂದಿತ್ತು. ನನಗೆ `ಗೃಹಭಂಗ' ಒಂದೇ ಅವರ ಒಳ್ಳೆಯ ಕೃತಿ. (ಯಾಕೆಂದರೆ ಭೈರಪ್ಪನವರ ವಕೀಲಿಪ್ರಜ್ಞೆ ಇಲ್ಲ ಕೆಲಸ ಮಾಡಿಲ್ಲ) ಅದೆಷ್ಟು ಒಳ್ಳೆಯ ಕೃತಿ ಅನ್ನಿಸಿತ್ತು ಅಂದರೆ ನಾನು ನ್ಯಾಷನಲ್ ಬುಕ್ ಟ್ರಸ್ಟ್‌ನ ಸದಸ್ಯನಾದಾಗ-ಗೋಕಾಕ್ ಮತ್ತು ಹರಿದಾಸಭಟ್ಟರೂ ಸದಸ್ಯರಾಗಿದ್ದರು-ಕೆಲವು ಕೃತಿಗಳನ್ನು ಭಾರತದ ಎಲ್ಲಾ ಹದಿನಾಲ್ಕು ಭಾಷೆಗಳಿಗೂ ಅನುವಾದಿಸಬೇಕೆಂದು ತೀರ್ಮಾನಿಸಿದಾಗ ಹರಿದಾಸಭಟ್ಟರು ನನ್ನ ಪುಸ್ತಕದ ಹೆಸರು ಹೇಳಿದರು. ನಾವೇ ಸದಸ್ಯರಾಗಿದ್ದು ನಮ್ಮ ನಮ್ಮ ಪುಸ್ತಕಗಳನ್ನು ನಾವು ನ್ಯಾಷನಲ್ ಬುಕ್ ಟ್ರಸ್ಟ್‌ಗೆ ಕೊಡಬಾರದು. ಬೇರೆ ಪುಸ್ತಕಗಳನ್ನು ಕೊಡಬೇಕು ಎಂದು ಕೊಂಡು ಭೈರಪ್ಪನವರ `ಗೃಹಭಂಗ'ವನ್ನು ನಾನು ಸೂಚಿಸಿದೆ. ಹಾಗೆಯೇ ಮೊಕಾಶಿಯವರ `ಗಂಗವ್ವ ಗಂಗಾಮಾಯಿ'ಯನ್ನೂ ಶಾಂತಿನಾಥರ ಮುಕ್ತಿಯನ್ನೂ ಆರಿಸಿದೆವು. ಆಮೇಲೆ ಅವರ `ಪರ್ವ' ಬಂತು. ಅದನ್ನು ಓದಿದಾಗ ನನಗೆ ಏನನ್ನಿಸಿತು ಅಂದರೆ-`ನೋಡಿ ವೇದವ್ಯಾಸರ ಭಾರತವನ್ನು ಅವರು ರಿಯಲಿಸ್ಟಿಕ್ ಮಾಡಿ ಬರೆದಿದ್ದಾರೆ. ಈ ಭೈರಪ್ಪನವರ ಭಾರತ ಸುಮಾರು ನಾಲ್ಕೈದು ಸಾವಿರ ವರ್ಷಗಳ ಹಿಂದೆ ನಡೆದಿರಬಹುದೋ ಏನೋ.. ಆದರೆ ವೇದವ್ಯಾಸರ ಭಾರತ ಇವತ್ತೂ ನಡಿಯುತ್ತಿದೆ' ಎಂದೆ. ಯಾಕೆಂದರೆ ಯಾವುದು ಪುರಾಣವಾಗಿ ಹೇಳಿದೆಯೋ ಅದು ಇವತ್ತೂ ನಡೆಯುತ್ತಿದೆ. ಯಾವುದನ್ನು ವಾಸ್ತವವೆಂಬಂತೆ ಬರೆದಿದ್ದಾರೋ ಅದು ಚಾರಿತ್ರಿಕವಾದ ಯಾವೊತ್ತೋ ಒಂದು ಕಾಲಮಾತ್ರದ ಕೃತಿಯಾಗಿದೆ. ಇದರಿಂದ ನನ್ನ ಸ್ನೇಹಿತರೂ ಆದ ಅವರ ಕೆಲ ಪ್ರಜ್ಞಾವಂತ ಅಭಿಮಾನಿಗಳಿಗೆ ನನ್ನ ಮೇಲೆ ಸಿಟ್ಟೂ ಬಂದಿತ್ತು.

ನಾನು ಕೆಲವು ವೈಯಕ್ತಿಕ ವಿಷಯಗಳನ್ನು ಇಲ್ಲಿ ಹೇಳಲೇಬೇಕು; ಇಲ್ಲದಿದ್ದರೆ ಬೇರೆಯವರು ಇದನ್ನು ಎಳೆದು ತಂದೇ ತರುತ್ತಾರೆ. ನಾನು ಸಾಹಿತ್ಯ ಅಕಾಡೆಮಿಯ ಚುನಾವಣೆಗೆ ನಿಂತೆ. ಆಗ ಭೈರಪ್ಪ ದಿಟ್ಟವಾಗಿಯೇ ವಿಮಾನದಲ್ಲಿ ಸಂಚರಿಸಿ ನನ್ನ ವಿರುದ್ಧ ಪ್ರಚಾರ ಮಾಡಿದರು. ಹೀಗೆ ಮಾಡುವುದಕ್ಕೆ ಅವರಿಗೆ ಎಲ್ಲಾ ಹಕ್ಕೂ ಇತ್ತು. ಕನ್ನಡದವರು ನನ್ನ ವಿರುದ್ಧ ಓಟು ಹಾಕಿದರು. ಮರಾಠಿ ಲೇಖಕರೊಬ್ಬರು ನನ್ನ ವಿರುದ್ಧ ಸ್ಪರ್ಧಿಸಿದ್ದರು. ಆದರೆ ಮರಾಠಿ ಲೇಖಕರು ನನಗೆ ಓಟು ಹಾಕಿದರು. . ಇದರಿಂದ ನನ್ನಲ್ಲಿ ಯಾವ ಕಹಿಯೂ ಉಂಟಾಗಲಿಲ್ಲ. ಇದು ಪ್ರಜಾಸತ್ತಾತ್ಮಕವಾಗಿ ನಡೆಯಬೇಕಾದ ಕ್ರಮ ಎಂದೇ ನಾನು ಈಗಲೂ ತಿಳಿದಿದ್ದೇನೆ.

ನಾನು ಕೇಳಿದಂತೆ ಅವರ ಆತ್ಮ ಚರಿತ್ರೆಯಲ್ಲಿ ಏನೋ ಹೇಳಿಕೊಂಡಿದ್ದಾರಂತೆ:. ಅವರು ದಾಟು ಬರೆದಾಗ ದಲಿತರು ಅವರ ಮನೆ ಮೇಲೆ ಕಲ್ಲುಹೊಡೆದರಂತೆ. ಅದರ ಹಿಂದೆ ನನ್ನ ಮಾತನ್ನು ಕೇಳುತ್ತಿದ್ದ ಆಲನಹಳ್ಳಿ ಕೃಷ್ಣ ಮತ್ತು ನನ್ನ ಕೈವಾಡ ಇತ್ತುಎಂದು ಗುಮಾನಿಯಾಗುವಂತೆ ಅವರು ಬರೆದಿದ್ದಾರೆ ಎಂದು ಕೇಳಿದ್ದೇನೆ. ಇದನ್ನವರು ಬರೆಯಬಾರದಿತ್ತು. ಏಕೆಂದರೆ ಇದು ಸುಳ್ಳು. ಎಷ್ಟು ಸುಳ್ಳು ಎಂದರೆ ಇದು ಅಲ್ಲ ಎಂದು ನಾನು ಮತ್ತೆ ಮತ್ತೆ ಹೇಳಿದರೆ, ಇರಬಹುದೇನೋ ಎಂಬ ಅನುಮಾನ ಶುರುವಾಗಿಬಿಡುತ್ತೆ. ಆದ್ದರಿಂದ ಈ ವರೆಗೆ ಈ ಬಗ್ಗೆ ನಾನು ಏನೂ ಹೇಳಿಲ್ಲ.

ನನಗೆ ಭೈರಪ್ಪನವರ ಬಗ್ಗೆ ಒಂದು ಸಮಸ್ಯೆ ಇದೆ. ಅವರು ಎಷ್ಟು ಪ್ರಸಿದ್ಧರು ಎಂದರೆ ಮರಾಠಿಯಲ್ಲಿ, ಹಿಂದಿಯಲ್ಲಿ ಎಲ್ಲ ಕಡೆಯೂ ಕನ್ನಡದ ಅತ್ಯಂತ ಪ್ರಸಿದ್ಧ ಒಬ್ಬ ಲೇಖಕರಿದ್ದರೆ ಅದು ಕಾರಂತರಲ್ಲ, ಕುವೆಂಪು ಅಲ್ಲ, ಬೇಂದ್ರೆ ಅಲ್ಲ, ನಾವ್ಯಾರೂ ಅಲ್ಲ.  read more »

Syndicate content